ಶಿವಮೊಗ್ಗ, ಜ.11: ಕುಂಸಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಪುರದಾಳು(ಶಾಂತಿ ಪುರ) ಗ್ರಾಮದಲ್ಲಿ 29 ಲಕ್ಷ ಮೊತ್ತದ ಓವರ್ ಹೆಡ್ ಟ್ಯಾಂಕ್ ಮತ್ತು 12 ಲಕ್ಷ ಮೊತ್ತದ ಅಂಬೇಡ್ಕರ್ ಭವನದ ಕಟ್ಟಡ ಉದ್ಘಾಟನೆ ಮತ್ತು 16 ಲಕ್ಷ ಮೊತ್ತದ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆಯನ್ನು ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ನಡೆಸಿದರು.
ಕುಂಸಿ ಜಿಲ್ಲಾ ಪಂಚಾಯತ್ ಸದಸ್ಯರಾದ ತಮ್ಮಡಿಹಳ್ಳಿ ನಾಗರಾಜ್, ತಾಲೂಕು ಪಂಚಾಯಿತಿ ಸದಸ್ಯರಾದ ಟಾಟಾ ಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಪ್ರೇಮ ಸುಧಾಕರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷೆ ಮಹಾಲಕ್ಷ್ಮಮ್ಮ, ಗ್ರಾಮ ಪಂಚಾಯಿತಿ ಸದಸ್ಯರು, ಹಿರಿಯರು, ಕಾರ್ಯಕರ್ತರು, ಗ್ರಾಮಸ್ಥರು, ಆರಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©